Monday, October 4, 2021

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ವಿವಿಧ ಸಾಹಿತ್ಯಿಕ ಸ್ಪರ್ಧೆಗಳ ಸಪ್ತಾಹ ಕಾರ್ಯಕ್ರಮ


ಜನಮಿಡಿತ ದಿನಪತ್ರಿಕೆಯಲ್ಲಿ ಪತ್ರಿಕಾ ವರದಿ ಪ್ರಕಟವಾಗಿದೆ.


ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ವಿವಿಧ ಸಾಹಿತ್ಯಿಕ ಸ್ಪರ್ಧೆಗಳ ಸಪ್ತಾಹ ಕಾರ್ಯಕ್ರಮ

"ಬತ್ತದ ತೊರೆ ಸ್ನೇಹ ಬಳಗ" ಕಾರಂತಜ್ಜನ ನೆರಳಿನಡಿಯಲ್ಲಿ... ಎಂಬ ಅಡಿಬರಹದೊಂದಿಗೆ ಹುಟ್ಟಿಕೊಂಡ ಹೊಸ ಸಾಹಿತ್ಯ ಬಳಗವು ಅಕ್ಟೋಬರ್ ಮೊದಲ ವಾರದಲ್ಲಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ವಿವಿಧ ಸಾಹಿತ್ಯಿಕ ಸ್ಪರ್ಧೆಗಳನ್ನು ನಡೆಸಲು ಮುಂದಾಗಿದೆ.
(೧) ದಿನಾಂಕ : ೦೪/೧೦/೨೦೨೧ ಸೋಮವಾರ ಕವನ ರಚನೆ ಹಾಗೂ ಕವನ ವಾಚನ ಸ್ಪರ್ಧೆ
(ವಿ.ಸೂ : ವಿಷಯ ನಿಮ್ಮ ಆಯ್ಕೆ. ಸಾಲುಗಳ ಮಿತಿ : ೨೦-೨೪ ಸಾಲುಗಳು. ಮೊಬೈಲ್ ಅಡ್ಡ ಹಿಡಿದು ವೀಡಿಯೋ ಮಾಡಿರಿ. ಸುಮಾರು ಮೂರು ನಿಮಿಷಗಳ ಕಾಲ)
(೨) ದಿನಾಂಕ : ೦೫/೧೦/೨೦೨೧ ಮಂಗಳವಾರ
"ನಾ ಓದಿದ ಕಾರಂತರ ಕಾದಂಬರಿ.. ವಿಮರ್ಶಾ ಲೇಖನ ಸ್ಪರ್ಧೆ"
(ವಿ.ಸೂ : ಪದಗಳ ಮಿತಿ ೧೦೦೦ ಪದಗಳು ಸುಮಾರು ಎರಡು ಪುಟಗಳಷ್ಟು)
(೩) ದಿನಾಂಕ : ೦೬/೧೦/೨೦೨೧ ಬುಧವಾರ
"ಲಲಿತ ಪ್ರಬಂಧಾ ಸ್ಪರ್ಧೆ"
(ವಿ.ಸೂ : ವಿಷಯ ನಿಮ್ಮದೇ ಇರಲಿ. ಪದಗಳ ಮಿತಿ ೧೦೦೦- ೧೫೦೦  (ಸುಮಾರು ಎರಡರಿಂದ ಮೂರು ಪುಟಗಳಷ್ಟು)
(೪) ದಿನಾಂಕ : ೦೭/೧೦/೨೦೨೧ ಗುರುವಾರ
ನೀವು ಭೇಟಿ ಮಾಡಿದ ಕುತೂಹಲಭರಿತ ಸ್ಥಳದ ಕುರಿತಾದ "ಪ್ರವಾಸ ಕಥನ"
(ವಿ.ಸೂ : ಪದಗಳ ಮಿತಿ ೧೦೦೦, ಸುಮಾರು ಎರಡು ಪುಟಗಳಷ್ಟು)
(೫) ದಿನಾಂಕ : ೦೮/೧೦/೨೦೨೧ ಶುಕ್ರವಾರ
"ಮಕ್ಕಳ ನಾಟಕ ರಚನೆ"
(ವಿ.ಸೂ : ವಿಷಯ ನಿಮ್ಮದೇ ಇರಲಿ. ಸುಮಾರು ಎರಡರಿಂದ ಮೂರು ಪುಟಗಳು, ಪಾತ್ರಗಳ ಸಂಖ್ಯೆ ೫-೭)
(೬) ದಿನಾಂಕ : ೦೯/೧೦/೨೦೨೧ ಶನಿವಾರ
ಚಟುವಟಿಕೆ ವಿಭಾಗದಲ್ಲಿ ಕಾರಂತರ ಭಾವಚಿತ್ರ ಅಥವಾ ಅವರ ಕಾದಂಬರಿಯ ಮುಖಪುಟದ ಚಿತ್ರವನ್ನು ಬಿಡಿಸುವುದು.

ನಿಯಮಗಳು :
ಹಿರಿಯರು , ಕಿರಿಯರು, ವಿದ್ಯಾರ್ಥಿಗಳು ಕೂಡ ಭಾಗವಹಿಸಬಹುದಾಗಿದೆ.
ಇಮೇಜ್ ಗಳನ್ನು ಸ್ವೀಕರಿಸುವುದಿಲ್ಲ.
ಬರಹಗಳಿಗೆ ಸೂಕ್ತ ಶೀರ್ಷಿಕೆ ನೀಡಬೇಕಾಗಿ ಕೋರಿಕೆ.
ನಿಮ್ಮ ಹೆಸರು, ಊರು ಮೊಬೈಲ್ ಸಂಖ್ಯೆ ಕಡ್ಡಾಯವಾಗಿ ನಮೂದಿಸಿರಬೇಕು.
ಭಾಗವಹಿಸಿದ ಪ್ರತಿಯೊಬ್ಬರಿಗೂ ಇ-ಪ್ರಮಾಣಪತ್ರವನ್ನು ನೀಡಿ ಗೌರವಿಸಲಾಗುವುದು. ಹಾಗೂ ಮೊದಲ‌ ಮೂವರು ವಿಜೇತರಿಗೆ ಪುಸ್ತಕ ಬಹುಮಾನದ ಜೊತೆಗೆ ಪ್ರಮಾಣಪತ್ರವನ್ನು ನೀಡಿ ಗೌರವಿಸಲಾಗುವುದು.


*******
ಕಾರಂತರ ಜನ್ಮದಿನದ ಅಂಗವಾಗಿ ಸ್ಪರ್ಧೆಗಾಗಿ ಎಂದು ನಮೂದಿಸಿರಿ.
ನಿಮ್ಮ ಬರಹಗಳನ್ನು ಕಳುಹಿಸಬೇಕಾದ ಇ-ಮೇಲ್  ಐಡಿ :  battadatore@gmail.com


ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಕೋರಿಕೆ.

ನಿರ್ವಾಹಕರು ಮತ್ತು ತೀರ್ಪುಗಾರರು
ಬತ್ತದ ತೊರೆ ಸ್ನೇಹ ಬಳಗ, ಬೆಂಗಳೂರು

1 comment:

ಡಾ. ಕೋಟ ಶಿವರಾಮ ಕಾರಂತರು ಕನ್ನಡ ಸಾಹಿತ್ಯಲೋಕದ ಹೊಳೆಯುವ ವಜ್ರ. ಅವರೊಂದು ವಿಶಾಲವಾದ ವಿಸ್ತಾರವಾಗಿ ಹರಡಿಕೊಂಡಿರುವ ಆಲದ ಮರ. ಯುವಕವಿಗಳಾದ ನಾವು ಅವರ ನೆರಳಿನಡಿಯಲ್ಲಿ ಸಾಗೋಣ. ಸಾಹಿತ್ಯ ಸೇವೆಯಲ್ಲಿ ತೊಡಗಿಸಿಕೊಳ್ಳೋಣ.
ಧನ್ಯವಾದಗಳು . ನಿಮ್ಮೆಲ್ಲರ ಸಹಕಾರ, ಪ್ರೋತ್ಸಾಹ ಸದಾ ಇರಲಿ.
ಬತ್ತದ ತೊರೆ ಸ್ನೇಹ ಬಳಗದಿಂದ...

ಹೊನ್ನತಂತಿ ಕವನ ಸಂಕಲನ ಓದಿರಿ

 ಪುಸ್ತಕದ ಹೆಸರು : ಹೊನ್ನತಂತಿ ಪ್ರಕಾರ : ಕವನ ಸಂಕಲನ ಸಂಪಾದಕರು : ಶ್ರೀಮತಿ ತುಳಸಿ (ಸಿಂಧು ಭಾರ್ಗವ), ಬೆಂಗಳೂರು ಬೆಲೆ : ₹120 ಪುಟಗಳು : 85 + 16 (ಒಟ್ಟು 100 ಪುಟಗ...